"ಸುಮಾರು ಅರವತ್ತು ವರ್ಷಗಳ ಹಿಂದೆ, ಹುಟ್ಟಿನ ಆಕಸ್ಮಿಕಗಳ ಹಂಗಿಲ್ಲದೇ ನಾವು ಹನ್ನೊಂದು ಮಂದಿ ಎಳೆಯರು, ರಘುವಿನ ಮನೆಯಲ್ಲಿ ಸೇರುತ್ತಿದ್ದೆವು. ಅಲ್ಲಿ ಆಡದ ಮಾತಿಲ್ಲ, ಮಾಡದ ಚಟುವಟಿಕೆಗಳಿಲ್ಲ...." ಎಂದೇ ತೊಡಗಿತ್ತು ಎನ್.ಜಿ ಮೋಹನರ ಪ್ರಾಸ್ತಾವಿಕ ಮಾತುಗಳು. ಸಂದರ್ಭ - ಮೋಹನ್ನರ ತಾಯಿ - ವಸಂತಿ ಟೀಚರ್ ಅವರ ಜನ್ಮ ಶತಾಬ್ದಿ, ಅವರ ಪುಸ್ತಕ - ಬೀದಿ
ದೀಪದ ಬೆಳಕು, ಇದರ ಲೋಕಾರ್ಪಣ ಮತ್ತು ‘ದ ಅನಿರುದ್ಧ್ ಚಾರಿಟೆಬಲ್ ಟ್ರಸ್ಟ್’ ಉದ್ಘಾಟನೆ. ಎನ್.ಜಿ ಮೋಹನ್ ಮಂಗಳೂರಿನಲ್ಲಿ ಕೆಲವು ಔಷಧ ಕಂಪೆನಿಗಳ ಯಶಸ್ವೀ ಸಗಟು ವಿತರಕರು. ಈ ತ್ರಿವಳಿ ಸಂತೋಷಕೂಟವನ್ನು ಮೋಹನ್ ಅವರ ಕಂಪೆನಿ - ‘ಬೆಟಾ ಏಜನ್ಸೀಸ್ ಅಂಡ್ ಪ್ರಾಜೆಕ್ಟ್ಸ್ ಪ್ರೈ.ಲಿ’, ಅವರ ಪ್ರಿಯ ಶಿಕ್ಷಣ ಸಂಸ್ಥೆ ಸಂತ ಅಲೋಶಿಯಸ್ ಕಾಲೇಜ್ ಸಹಯೋಗ ಮತ್ತು ಸಭಾಂಗಣದಲ್ಲಿ (೧೫-೫-೨೦೨೨, ಆದಿತ್ಯವಾರ ಸಂಜೆ) ವ್ಯವಸ್ಥೆ ಮಾಡಿತ್ತು.